ಕೊಳ್ಳೇಗಾಲ. ಕರ್ನಾಟಕ ರಾಜ್ಯ ರೈತ ಸಂಘ ದೊಡ್ಡಿಂದುವಾಡಿ ಹಾಗೂ ಸಿಂಗನಲ್ಲೂರು ಶಾಖೆ ರೈತರಿಂದ ಗ್ರಾಮೀಣ ಭಾಗದಲ್ಲಿ ಹಾಗೂ ಗುಂಡಾಲ್ ಜಲಾಶಯದ ಸಂಪರ್ಕ ಕಲ್ಪಿಸುವ ರಸ್ತೆ ಹಳ್ಳಗಳಿಂದ ಕೂಡಿದ್ದು ಅದನ್ನು ಅಭಿವೃದ್ಧಿ ಪಡಿಸಲು ವಿಫಲರಾಗಿರುವ ಶಾಸಕರು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಬಿಕ್ಷೆ ಎತ್ತುವ ಚಳುವಳಿ ಹಮ್ಮಿಕೊಂಡಿದ್ದರು.

ತಾಲ್ಲೂಕಿನ ಕಾಮಗೆರೆ, ಸಿಂಗನಲ್ಲೂರು ಹಾಗೂ ದೊಡ್ಡಿಂದುವಾಡಿ ಭಿಕ್ಷೆ ಚಳುವಳಿ ನಡೆಸಿದರು. ಬಳಿಕ ದೊಡ್ಡಿಂದುವಾಡಿ ಗ್ರಾಮದ ವೃತ್ತದ ಬಳಿ ಪ್ರತಿಭಟನೆ ನಡೆಸಿದ್ದ ಪ್ರತಿಭಟನಾಕಾರರನ್ನು ಲೋಕೋಪಯೋಗಿ ಇಲಾಖೆಯ ಎಇಇ ಪುರುಷೋತ್ತಮ್, ಎಇ ಸುರೇಂದ್ರ, ಜಿ.ಪಂ ಉಪವಿಭಾಗ ಎಇಇ ಕುಮಾರ್, ಇಂಜಿನಿಯರ್ ಮಂಜು, ಕಬಿನಿ ಇಲಾಖೆ ಎಇ ರಾಮಕೃಷ್ಣ, ಪಿಡಿಒ ಮರಿಸ್ವಾಮಿ ಭೇಟಿ ನೀಡಿ ಮಾತನಾಡಿದರು.

ಈ ಪ್ರತಿಭಟನೆಯಲ್ಲಿ ಜಿಲ್ಲಾ ರೈತ ಸಂಘದ ಕಾರ್ಯಾಧ್ಯಕ್ಷ ಶೈಲೇಂದ್ರ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪೆರಿಯಾನಾಯಗಂ, ಮಧುವನಹಳ್ಳಿ ಬಸವರಾಜು, ಅಣಗಳ್ಳಿ ಗ್ರಾಮಘಟಕ ಕೀರ್ತಿ, ಲಾರೆನ್ಸ್, ತಾಲ್ಲೂಕು ಯುವ ಘಟಕ ಅಧ್ಯಕ್ಷರು ವಾಸು, ದೊಡ್ಡಿಂದುವಾಡಿ ಗ್ರಾಮಘಟಕ ಅಧ್ಯಕ್ಷರು ವಸಂತ ಕುಮಾರ್, ಉಪಾಧ್ಯಕ್ಷರು ಸುರೇಂದ್ರ, ಮನುಗೌಡ, ರವಿ, ನಾಗೇಂದ್ರ, ಶಿವರಾಮ್, ಗೋವಿಂದರಾಜು, ನಂದೀಶ್, ಅಬ್ದುಲ್ ಖಾದೀರ್, ಸಿಂಗನಲ್ಲೂರು ಗ್ರಾಮಘಟಕ ಅಧ್ಯಕ್ಷರು ಬೆಟ್ಟೇಗೌಡ, ಆರ್.ಅರುಪದರಾಜ್, ಜಾನ್ ಜೋಸೆಫ್,

ಭಿಕ್ಷಾಟನೆ ಮಾಡಿ ಒಟ್ಟು 3555 ರೂ.ನ್ನು ಸಂಗ್ರಹಿಸಿ ಲೋಕೋಪಯೋಗಿ ಇಲಾಖೆ, ನೀರಾವರಿ ಇಲಾಖೆ ಹಾಗೂ ಜಿ.ಪಂ ಇಲಾಖೆಗೆ ತಲಾ 1,185 ರೂ.ನ್ನು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ನೀಡಲು ಮುಂದಾದಾಗ ಅಧಿಕಾರಿಗಳು ಸ್ವೀಕರಿಸಿದ ಹಿನ್ನಲ್ಲೆ ಪ್ರತಿಭಟನೆ ಮುಂದುವರೆಯಿತಿತ್ತು.

ವರದಿ : ನಿಂಪು ಬ್ರದರ್ಸ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.