ಚಕೊಳ್ಳೇಗಾಲ. ತಾಲ್ಲೂಕು ಜೈ ಭೀಮ್ ರೈತ ಸಂಘದ ವತಿಯಿಂದ ಜ್ಯೋತಿಗೌಡನಪುರ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಬುದ್ಧನ ವಿಗ್ರಹವನ್ನು ವಿರೂಪಗೊಳಿಸಿರುವ ಹೀನಕೃತ್ಯವನ್ನು ಖಂಡಿಸಿ, ಅಪರಾಧಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಎಪಿಎಂಸಿ ಆವರಣದಲ್ಲಿ ಮಂಗಳವಾರ ಜೈ ಭೀಮ ರೈತ ಸಂಘದ ಪದಾಧಿಕಾರಿಗಳು ಸಭೆ ಕರೆದು ಬಳಿಕ ಮೌನ ಮೆರವಣಿಗೆ ಮೂಲಕ ಡಾ.ಅಂಬೇಡ್ಕರ್ ವೃತ್ತಕ್ಕೆ ತೆರಳಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ತಾಲ್ಲೂಕು ಕಚೇರಿಗೆ ತೆರಳಿ ತಪ್ಪಿಸ್ಥರನ್ನು ಬಂಧಿಸಿ, ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ತಹಶಿಲ್ದಾರ್ ಬಸವರಾಜು ರವರಿಗೆ ಮನವಿ ಸಲ್ಲಿಸಿದರು.

ಜೇತವನ ಬೌದ್ಧ ವಿಹಾರದ ಮನೋರಖಿತ ಬಂತೇಜಿ ಅವರು ಮಾತನಾಡಿ ಸಮಾಜದ ಶಾಂತಿ ಹಾಗೂ ಸೌಹಾರ್ದತೆಯನ್ನು ಭಂಗಪಡಿಸುವ ಉದ್ದೇಶದಿಂದ ಇಂತಹ ನಾಚಿಕೆಗೇಡಿತನದ ಕೃತ್ಯಗಳು ನಡೆಯುತ್ತಿವೆ. ಸರ್ಕಾರ ತಕ್ಷಣ ಕ್ರಮ ಕೈಗೊಂಡು ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹಿರಿಯ ರೈತ ಮುಖಂಡರಾದ ಅಣಗಳ್ಳಿ ಬಸವರಾಜು, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷರು ಆನಂದಮೂರ್ತಿ, ಕಾರ್ಯದರ್ಶಿ ಪಾಪಣ್ಣ, ಜೈ ಭೀಮ್ ರೈತ ಸಂಘ ಅಧ್ಯಕ್ಷ ಮಲ್ಲರಾಜು, ಕಾರ್ಯದರ್ಶಿ ಮುರುಳಿಧರ್, ಹಿರಿಯ ಮುಖಂಡರು ಅಣಗಳ್ಳಿ ಬಸವರಾಜು, ಕೆಂಪರಾಜು, ಚಾಮರಾಜು, ಕರವೇ (ಪ್ರವೀಣ್ ಶೆಟ್ಟಿ ಬಣ) ಜಿಲ್ಲಾಧ್ಯಕ್ಷರು ಮೋಹನ್, ಕಾರ್ಯದರ್ಶಿ ರಿಯಾಜ್ ಪಾಷ ಹಾಗೂ ರೈತರು ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ವರದಿ : ನಿಂಪು ರಾಜೇಶ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.