ಕೊಳ್ಳೇಗಾಲ. ಜಾತಿ ಸಮೀಕ್ಷೆ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮುದಾಯಗಳನ್ನು ವಿಭಜಿಸುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಚಾ.ನಗರದಲ್ಲಿ ಕಾರ್ಯಕ್ರಮ ನಿಮ್ಮಿತ್ತ ಪಟ್ಟಣಕ್ಕೆ ಆಗಮಿಸಿದ ಶೆಟ್ಟರ್ ಅವರು ಮಾಧ್ಯಮವರ ಜೊತೆ ಮಾತನಾಡಿ, ಲಿಂಗಾಯತ, ಒಕ್ಕಲಿಗ ಹಾಗೂ ಹಿಂದುಳಿದ ಸಮುದಾಯಗಳನ್ನು ಒಡೆಯುವ ರಾಜಕೀಯ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಸಮಾಜವನ್ನು ಹೊಡೆದು ತಾವು ಅಧಿಕಾರವನ್ನು ಮುಂದುವರಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಜ್ಜೆ ಇಟ್ಟಿದ್ದಾರೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಸ್ಥಾನದಲ್ಲಿರುವ ವ್ಯಕ್ತಿಯು ಎಲ್ಲರೊಂದಿಗೆ ಗೌರವಯುತವಾಗಿ ವರ್ತಿಸಬೇಕು ಒಬ್ಬ ಲೋಕಸಭಾ ಸದಸ್ಯರೊಂದಿಗೆ ಲಘುವಾಗಿ ಮಾತನಾಡುವುದು ಸಮಂಜಸವಲ್ಲ. ಸಿದ್ದರಾಮಯ್ಯ ಅವರ ಶೈಲಿಯಲ್ಲಿ ಮಾತನಾಡುವುದು ಮುಖ್ಯಮಂತ್ರಿಯ ಸ್ಥಾನಕ್ಕೆ ಯೋಗ್ಯವಲ್ಲ, ಎಂದು ಕಿಡಿಕಾರಿದರು.
ಹಣದ ಅಹಂಕಾರ ಮತ್ತು ಅಧಿಕಾರದ ಮದದಿಂದ ಸಿದ್ದರಾಮಯ್ಯ ಬೇಗನೆ ಅಳಿಯಲಿದ್ದಾರೆ,ಎಂದು ಟೀಕಿಸಿದರು.

ರಾಜ್ಯ ಸರ್ಕಾರದೊಳಗಿನ ಆಂತರಿಕ ಜಗಳದಿಂದ ಜನತೆ ಗೊಂದಲಕ್ಕೊಳಗಾಗಿದ್ದಾರೆ. ಸರ್ಕಾರದ ವ್ಯವಸ್ಥೆ ಅವ್ಯವಸ್ಥೆಯಿಂದ ಕೂಡಿದೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಶೆಟ್ಟರ್ ದೂರಿದರು.
ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು ನಿರಂಜನ್ ಕುಮಾರ್, ಬಿಜೆಪಿ ರಾಜ್ಯ ಉಪಾಧ್ಯಕ್ಷರು ಎನ್.ಮಹೇಶ್, ಮಾಜಿ ಶಾಸಕ ಎಸ್.ಬಾಲರಾಜು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು ಡಾ.ದತ್ತೇಶ್ ಕುಮಾರ್, ನಗರ ಮಂಡಲ ಅಧ್ಯಕ್ಷರು ಚಿಂತು ಪರಮೇಶ್,
ಪಿಎಸಿಸಿಎಸ್ ಸಂಘದ ಅಧ್ಯಕ್ಷರು ರಮೇಶ್, ಎಸ್ಸಿ ಮೋರ್ಚಾ ಸಿದ್ದಪ್ಪಾಜಿ ಹಾಗೂ ಕಾರ್ಯಕರ್ತರು ಇದ್ದರು.

ವರದಿ : ನಿಂಪು ರಾಜೇಶ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.