ಕೊಳ್ಳೇಗಾಲ. ಡಾ.ಬಿ.ಆರ್.ಅಂಬೇಡ್ಕರ್ ರವರ 69 ನೇ ಪರಿನಿಬ್ಬಾಣ ದಿನದ ಅಂಗವಾಗಿ ಮುಂಬತ್ತಿ ಮೆರವಣಿಗೆ ನಡೆಸಿದರು.
ಪಟ್ಟಣದ ಭೀಮನಗರ ಬಡಾವಣೆಯಿಂದ ಹೊರಟ ಮೆಣದ ಬತ್ತಿ ಮೆರವಣಿಗೆ ಸಾಮಂದಿಗೇರಿ ಬೀದಿ, ಮಕ್ಕಳ ಮೈದಾನ ವೃತ್ತ, ಕನ್ನಿಕಾ ಪರಮೇಶ್ವರಿ ರಸ್ತೆ, ಮಸೀದಿ ವೃತ್ತ, ಡಾ.ಅಂಬೇಡ್ಕರ್ ರಸ್ತೆ ಮೂಲಕ ಅಂಬೇಡ್ಕರ್ ಪ್ರತಿಮೆಗೆ ತೆರಳಿದರು.
ಈ ಸಂಧರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷರು ಆನಂದಮೂರ್ತಿ, ಕಾರ್ಯದರ್ಶಿ ಪಾಪಣ್ಣ, ಉಪಾಧ್ಯಕ್ಷ ಕಿರಣ್, ಹೈಕೋರ್ಟ್ ವಕೀಲರು ಮೋಹನ್ ಕುಮಾರ್, ಮುಳ್ಳೂರು ಮಂಜು, ಭೀಮನಗರ ದೊಡ್ಡ ಯಜಮಾನರು ಚಿಕ್ಕಮಾಳಿಗೆ ಹಾಗೂ ಇತರರು ಇದ್ದರು.
- ನಿಂಪುವಾರ್ತೆ
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.