ಕಾಡಾನೆಗಳ ದಾಳಿಗೆ ಮುಸುಕಿನ ಜೋಳದ ಫಸಲು ನಷ್ಟ ಉಂಟಾಗಿದೆ ಅರಣ್ಯ ಅಧಿಕಾರಿಗಳು ಪರಿಹಾರ ನೀಡಬೇಕು ಎಂದು ರೈತ ಸಂಘಟನೆ ಒತ್ತಾಯಿಸಿದ್ದಾರೆ .

ಹನೂರು ತಾಲೂಕಿನ ಕೆ ವಿ ಎನ್ ದೊಡ್ಡಿ ಗ್ರಾಮದ ಖದಿರಯ್ಯ ತಮ್ಮ ಜಮೀನಿನಲ್ಲಿ ಮುಸುಕಿನ ಜೋಳದ ಫಸಲನ್ನು ಹಾಕಲಾಗಿದ್ದು ಜಮೀನಿನ ಸುತ್ತಲೂ ಕಲ್ಲು ಕಂಬ ಮತ್ತು ಮೆಸ್ ಅಳವಡಿಸಲಾಗಿದ್ದು ಕಾಡಾನೆಗಳು ರಾತ್ರಿ ವೇಳೆ ಅರಣ್ಯ ಪ್ರದೇಶದಿಂದ ಬಂದಿರುವ ಕಾಡಾನೆಗಳು ಕಲ್ಲು ಕಂಬ ಮತ್ತು ತಂತಿ ಬೇಲಿಯನ್ನು ತುಳಿದು ಅಳು ಮಾಡಿದ್ದು ಮುಸ್ಕಿನ ಜೋಳದ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿದೆ ಎಂದು ರೈತ ಕಂಗಲಾಗಿದ್ದಾರೆ ….

ಸಾಲ ಮಾಡಿ ಹಾಕಲಾಗಿರುವ ಬೆಳೆ ಮತ್ತು ತಂತಿಬೆಲೆ ನಾಶ: ಇರುವ ಅಲ್ಪ ಸ್ವಲ್ಪ ನೀರಿನಲ್ಲಿ ಜಮೀನಿನಲ್ಲಿ ಮುಸುಕಿನ ಜೋಳವನ್ನು ಹಾಕಲಾಗಿದ್ದು ತೆನೆ ಕಟ್ಟಿ ಕಾಳ ಕಟ್ಟುವ ಸಮಯವಾಗಿದ್ದು ಅರಣ್ಯ ಪ್ರದೇಶದಿಂದ ಬಂದಂತ ಕಾಡಾನೆಗಳು ತಂತಿ ಬೇಲಿ ಕಲ್ಲು ಕಂಬಗಳನ್ನು ಮುರಿದು ನಷ್ಟ ಉಂಟು ಮಾಡಿದೆ ಜೊತೆಗೆ ಬೆಳೆ ಸಹ ತಿಂದು ತುಳಿದು ಹಾಳು ಮಾಡಿದೆ ಹೀಗಾಗಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕಾಡುಪ್ರಾಣಿಗಳ ಅವಳಿಯನ್ನು ತಡೆಗಟ್ಟಲು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಸೂಕ್ತ ಪರಿಹಾರಕ್ಕೆ ಒತ್ತಾಯ : ದಿನದಿಂದ ದಿನಕ್ಕೆ ಅರಣ್ಯದಂಚಿನ ಭಾಗದಲ್ಲಿ ರೈತರ ಜಮೀನುಗಳಲ್ಲಿ ಬೆಳೆ ಹಾನಿ ಉಂಟಾಗುತ್ತಿದೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ರೈತನಿಗೆ ಫಸಲು ತೆಗೆಯುವುದೇ ದೊಡ್ಡ ತಲೆನೊವಾಗಿ ಪರಿಣಮಿಸಿತ್ತು ಬೆಳೆ ಬೆಳೆದು ಕುಟುಂಬದ ನಿರ್ವಹಣೆಗಾಗಿ ಮಾಡಲಾಗಿರುವ ಬೆಳೆ ಕೈ ಸೇರದೆ ನಷ್ಟ ಉಂಟಾಗಿರುವುದರಿಂದ ಅರಣ್ಯ ಅಧಿಕಾರಿಗಳು ರೈತನ ಜಮೀನಿಗೆ ಭೇಟಿ ನೀಡಿ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ …

ಅರಣ್ಯದಂಚಿನಲ್ಲಿ ಕಾಡುಪ್ರಾಣಿಗಳ ಅವಳಿ ತಡೆಗಟ್ಟಿ : ಅರಣ್ಯಾಧಿಕಾರಿಗಳ ನಿರ್ಲಕ್ಷತನದಿಂದ ರೈತರ ಜಮೀನುಗಳಲ್ಲಿ ಬೆಳೆಯಲಾಗಿರುವ ಪಸಲು ರೈತರ ಕೈ ಸೇರದೆ ಕಾಡುಪ್ರಾಣಿಗಳ ಹಾವಳಿಗೆ ತುತ್ತಾಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗುತ್ತಿದೆ ಹೀಗಾಗಿ ಸಂಬಂಧಪಟ್ಟ ಇಲಾಖೆ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ನಷ್ಟ ಉಂಟಾಗಿರುವ ಪರಿಹಾರವನ್ನು ನೀಡಲು ಕ್ರಮ ಕೈಗೊಳ್ಳಬೇಕು ಎಂದು ರೈತ ಕದಿರಯ್ಯ ಒತ್ತಾಯಿಸಿದ್ದಾರೆ

ವರದಿ : ನಿಂಪು ಬ್ರದರ್ಸ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.