ಕೊಳ್ಳೇಗಾಲ: ಕೊಳ್ಳೇಗಾಲ ಪಟ್ಟಣದಲ್ಲಿ ನಿರ್ಮಾಣ ಆಗುತ್ತಿರುವ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಯನ್ನು ಕೆ.ಆರ್.ಐ.ಡಿ.ಎಲ್ ಹಿರಿಯ ಅಧಿಕಾರಿಗಳ ಸೂಚನೆಯ ಮೇರೆಗೆ ಗುರವಾರದಿಂದ ಭವನ ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಬೆಂಗಳೂರು ಕೆ.ಆರ್. ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಿಂದ ಬಂದ ಆದೇಶದ ಮೇರೆಗೆ ಕೊಳ್ಳೇಗಾಲ ಕೆ.ಆರ್.ಐ.ಡಿ.ಎಲ್. ಸಹಾಯಕ ಅಭಿಯಂತರರಾದ ಚಿಕ್ಕಲಿಂಗಯ್ಯ ಅವರು ಗುರುವಾರ ಸಾಯಂಕಾಲ ಅಂಬೇಡ್ಕರ್ ಭವನಕ್ಕೆ ತೆರಳಿ ಕಾಮಗಾರಿಯನ್ನು ನಿಲ್ಲಿಸಿ ಮುಂಬಾಗಿಲಿಗೆ ಬೀಗ ಜಡಿದಿದ್ದಾರೆ.

ಈ ಬೆಳವಣಿಗೆಯಿಂದ ಇದೇ ತಿಂಗಳು 29 ರಂದು ಅಂಬೇಡ್ಕರ್ ಭವನ ಉದ್ಘಾಟನೆಗೆ ಮುಂದಾಗಿದ್ದ ಆನಂದಮೂರ್ತಿ ಅದ್ಯಕ್ಷರಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ಸ್ಮಾರಕ ಸಂಘಕ್ಕೆ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ರಿದೆ.

ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳ್ಳದೇ ಭವನ ಉದ್ಘಾಟನೆಗೆ ಮುಂದಾಗಿರುವ ಸ್ಮಾರಕ ಸಂಘದ ನಿರ್ಧಾರವನ್ನು ಪ್ರಶ್ನಿಸಿ ಭೀಮನಗರದ ಅನೇಕರು ಕುಲದವರಿಗೆ ಪತ್ರ ನೀಡಿದ್ದಾರೆ. ಇದೇ ವಿಷಯವಾಗಿ ಶನಿವಾರ ಬೆಳಿಗ್ಗೆ ಭೀಮ ನಗರದಲ್ಲಿ ಕುಲಸ್ಥರ ಸಭೆ ಕರೆಯಲಾಗಿದೆ ಎಂದು ತಿಳಿದು ಬಂದಿದೆ.

ಭೀಮನಗರದ ಜನತೆಯ ಸಮ್ಮುಖದಲ್ಲಿ ಅಂಬೇಡ್ಕರ್ ಭವನ ಉದ್ಘಾಟನೆಗೆ ದಿನಾಂಕ ನಿಗದಿ ಮಾಡದೇ..ಕೇವಲ ಬೆರಳಣಿಕೆ ಮಂದಿ ಪತ್ರಿಕಾ ಗೋಷ್ಠಿಯಲ್ಲಿ ಇದೇ ತಿಂಗಳು 29 ರಂದು ಭವನ ಉದ್ಘಾಟನೆ ನಡೆಸುವ ಬಗ್ಗೆ ಹೇಳಿರುವುದು ಭೀಮನಗರದ ಅನೇಕ ಮುಖಂಡರನ್ನು ಕೆರಳಿಸಿದೆ.

ಅಂಬೇಡ್ಕರ್ ಭವನ ಕಾಮಗಾರಿ ಮೂಲನಕ್ಷೆಯಂತೆ ನಡೆದಿಲ್ಲ ಎಂಬುದು ಅನೇಕರ ಪ್ರಶ್ನೆ ಆಗಿದೆ.

ವರದಿ : ನಿಂಪು ಬ್ರದರ್ಸ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.