ಕೊಳ್ಳೇಗಾಲ: ಕೊಳ್ಳೇಗಾಲ ತಾಲೂಕಿನ ಕೆಂಪನಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಪಾಲ್ಗೊಂಡು ಅತಿ ಹೆಚ್ಚು ಬಹುಮಾನವನ್ನು ಪಡೆದು ಕೊಂಡಿದ್ದಾರೆ.

ಕೆಂಪನಪಾಳ್ಯ ಗ್ರಾಮದ ಸರ್ಕಾರಿ ಶಾಲೆಯಲ್ಲಿ 25 ಮಕ್ಕಳು ಕಾಮಗೆರೆ ಕ್ಲಸ್ಟರ್ ನಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ 18 ಮಕ್ಕಳಿಗೆ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶೈಲೇಂದ್ರ ಬಹುಮಾನ ವಿತರಿಸಿದರು,

ಈ ವೇಳೆ ಮಾತನಾಡಿದ ಅವರು, ನಮ್ಮ ಗ್ರಾಮದ ಶಾಲಾ ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ವಿವಿಧ ವಿಭಾಗಗಳ ಸ್ಪರ್ದೆಯಲ್ಲಿ ಪಾಲ್ಗೊಂಡು ಹೆಚ್ಚು ಬಹುಮಾನ ಗಳಿಸಿದ್ದಾರೆ.
ಶಾಲೆಯ ಮಕ್ಕಳ ಸಾಧನೆ ಮತ್ತು ತರಭೇತಿ ನೀಡಿದ ಶಿಕ್ಷಕರ ಶ್ರಮ ಮೆಚ್ಚುವಂತಹದ್ದು ಎಂದು ತಿಳಿಸಿದರು.
ಈ ವೇಳೆ ಮುಖ್ಯ ಶಿಕ್ಷಕಿ ಚಂದ್ರಕಲಾ,ಸಹ ಶಿಕ್ಷಕರಾದ ಜಯಶಾಂತಮೇರಿ ,ಶಿಕ್ಷಕರಾದ ಮೋಕ್ಷ ರಾಣಿ,ಕೆಂಪರಾಜು, ಸೌಮ್ಯಲತಾ, ಪಾರ್ವತಮ್ಮ, ವೆಂಕಟೇಶ್,ವಸಂತಮ್ಮ,ಇದ್ದರು.

ವರದಿ : ನಿಂಪು ಬ್ರದರ್ಸ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.